Kannada NewsLatest

ಬೆಳಗಾವಿ: ಕನ್ನಡಪರ ಹೋರಾಟಗಾರನ ಅಂಗಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಕನ್ನಡಪರ ಹೋರಾಟಗಾರನ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ.

ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ಸ್ಥಾಪಿಸಿದ್ದಕ್ಕಾಗಿ ಕನ್ನಡ ಪರ ಹೋರಾಟಗಾರ ಶ್ರೀನಿವಾಸ ತಾಳೂಕರ್ ಎಂಬುವವರ ಜನರಲ್ ಸ್ಟೋರ್ , ಎಸ್ ಟಿಡಿ ಬೂತ್ ಗೆ ಕಿಡಿಗೆಡಿಗಳು ತಡರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಅಂಗಡಿ ಪಕ್ಕವೇ ಮನೆ ಇದ್ದಿದ್ದರಿಂದ ಅಂಗಡಿಗೆ ಬೆಂಕಿ ಹಚ್ಚಿದ್ದನ್ನು ಗಮನಿಸಿದ ಕುಟುಂಬಸ್ಥರು ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದ್ದಾರೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button