Belagavi NewsBelgaum NewsEducationKannada NewsKarnataka NewsLatest

*ಕೆಎಲ್ಎಸ್  ಜಿಐಟಿಯಲ್ಲಿ ಅಗ್ರ ಶ್ರೇಯಾಂಕಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಕೆಎಲ್‌ಎಸ್‌  ಜಿಐಟಿಯ ಸಿಲ್ವರ್  ಜುಬಿಲಿ ಸಭಾಂಗಣದಲ್ಲಿ , ಇದೇ  30 ಡಿಸೆಂಬರ್ 2023 ರಂದು ಬೆಳಿಗ್ಗೆ 11 ಗಂಟೆಗೆ, 2022-23ನೇ ಸಾಲಿನ , ಅಗ್ರ ಶ್ರೇಯಾಂಕಿತ ವಿದ್ಯಾರ್ಥಿಗಳಿಗೆ  ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಸಂಧರ್ಭದಲ್ಲಿ ಒಟ್ಟು 54 ವಿದ್ಯಾರ್ಥಿಗಳಿಗೆ , ಶೈಕ್ಷಣಿಕ, ಕ್ರೀಡೆ, ಹಾಗೂ ಉತ್ತಮ ಸಾಂಸ್ಕೃತಿಕ ಸಾಧನೆಗಾಗಿ  , ಕೆಎಲ್‌ಎಸ್ ಆಡಳಿತ ಮಂಡಳಿ, ದಾನಿಗಳು ಮತ್ತು ಹಳೆಯ ವಿದ್ಯಾರ್ಥಿಗಳಿಂದ ಘೋಷಿಸಲ್ಪಟ್ಟ , ಪ್ರಶಸ್ತಿ, ಪ್ರಮಾಣಪತ್ರ, ವಿದ್ಯಾರ್ಥಿವೇತನ ಮತ್ತು ಬಹುಮಾನಗಳನ್ನು ನೀಡಲಾಯಿತು.

ಸಮಾರಂಭದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಟಿ. ಎನ್. ಶ್ರೀನಿವಾಸ, ಕರ್ನಾಟಕ ಲಾ ಸೊಸೈಟಿಯ ಉಪಾಧ್ಯಕ್ಷ ಶ್ರೀ ದೀಪಕ ವಿ. ಕುಲಕರ್ಣಿ, ಜಿಐಟಿ ಆಡಳಿತ ಮಂಡಳಿ , ಚೇರ್ ಮನ್ , ಶ್ರೀ ರಾಜೇಂದ್ರ ಬೆಳಗಾಂವಕರ, ಜಿಐಟಿ ಪ್ರಾಚಾರ್ಯರು,  ಡಾ. ಎಂ. ಎಸ್. ಪಾಟೀಲ್ ಮತ್ತು ಡಾ ಪಿ.  ಅರುಣ್‌ಕುಮಾರ್, ಡೀನ್ ಅಕಾಡೆಮಿಕ್ಸ್, ಉಪಸ್ಥಿತರಿದ್ದರು.

Home add -Advt

ಡಾ. ಟಿ. ಎನ್. ಶ್ರೀನಿವಾಸ ಅವರು ಅಗ್ರ ಶ್ರೇಯಾಂಕಿತ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಪ್ರಯತ್ನವನ್ನು ಅಭಿನಂದಿಸಿದರು. ವಿಟಿಯು ಪ್ರಾರಂಭಿಸಿದ ವಿವಿಧ ಉಪಕ್ರಮಗಳಾದ ಆನರ್ಸ್  ಮತ್ತು ಮೈನರ್ಸ್ ಕೋರ್ಸ್‌ಗಳು , ಪ್ರಮಾಣೀಕೃತ ಕೋರ್ಸ್‌ಗಳು ಇತ್ಯಾದಿಗಳ ಕುರಿತು ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ, ವಿಭಾಗ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು .

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button