Kannada NewsLatest

ಸಾರಿಗೆ ಸಿಬ್ಬಂದಿಗೆ ವೇತನ ತಡೆಹಿಡಿದಿಲ್ಲ: ಸಚಿವ ಸವದಿ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ನಿಪ್ಪಾಣಿ: 2,652 ಕೋಟಿ ನಷ್ಟವನ್ನು ಕೆ.ಎಸ್.ಆರ್.ಟಿ.ಸಿ ಅನುಭವಿಸುತ್ತಿದೆ. ಆದರೂ ಸಂಸ್ಥೆಯ 1 ಲಕ್ಷ 30 ಸಾವಿರ ಸಿಬ್ಬಂದಿಗೆ ವೇತನ ನೀಡಲಾಗುವುದು ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಳಗಾವಿಯ ನಿಪ್ಪಾಣಿಯಲ್ಲಿ ಮಾತನಾಡಿದ ಅವರು, ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದರು.

ಸಾರಿಗೆ ಸಿಬ್ಬಂದಿಗೆ ವೇತನ ರಹಿತ ರಜೆಯನ್ನು ಪಡೆಯುವಂತೆ ಒತ್ತಾಯ ಮಾಡುತ್ತಿಲ್ಲ, ಯಾವುದೇ ಕಾರಣಕ್ಕೂ ಸಿಬ್ಬಂದಿಯ ವೇತನವನ್ನು ಸರಕಾರ ತಡೆ ಹಿಡಿಯಲ್ಲ. ಪ್ರತಿ ತಿಂಗಳು 126 ಕೋಟಿ ಸಿಬ್ಬಂದಿ ವೇತನವನ್ನು ನೀಡಬೇಕಾಗುತ್ತದೆ. ಮುಖ್ಯಮಂತ್ರಿಗಳು 326 ಕೋಟಿ ನೀಡಿದ್ದು, ಸಿಬ್ಬಂದಿಯ 2 ತಿಂಗಳ ವೇತನ ನೀಡಲಾಗಿದೆ ಎಂದು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button