Kannada NewsLatest

ಅರಬಾವಿ, ಗೋಕಾಕ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸತೀಶ್ ಜಾರಕಿಹೊಳಿ ಭರ್ಜರಿ ಮತಬೇಟೆ

ಪ್ರಗತಿವಾಹಿನಿ ಸುದ್ದಿ; ಅರಬಾವಿ: ಅರಬಾವಿ ಹಾಗೂ ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ಇಂದು ಭರ್ಜರಿ ಮತಬೇಟೆ ನಡೆಸಿದರು.

ಬೆಟಗೇರಿ, ಯಾದವಾಡ, ಮಮದಾಪುರ, ಕೌಜಲಗಿ ಸೇರಿ ವಿವಿಧ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ ಸತೀಶ ಅವರು, ಅಲ್ಲಲ್ಲಿ ಕಾರ್ಯಕರ್ತರು ಹಾಗೂ ಮುಖಂಡರ ಸಭೆಗಳನ್ನು ಮಾಡಿದರು.

ಅರಬಾವಿ ಮತಕ್ಷೇತ್ರದ ಕೌಜಲಗಿಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, “ಬೆಳಗಾವಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಈ ಬಾರಿ ನನಗೆ ಅವಕಾಶ ಮಾಡಿಕೊಡಿ” ಎಂದು ಮನವಿ ಮಾಡಿದರು.

ಜಿಪಂ ಮಾಜಿ ಸದಸ್ಯ ಹಾಗೂ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ರಾಜೇಂದ್ರ ಸಣ್ಣಕ್ಕಿ ಮಾತನಾಡಿ, “ಸದೃಢ ಬೆಳಗಾವಿ ನಿರ್ಮಾಣಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿಯನ್ನು ಬೆಂಬಲಿಸೋಣ” ಎಂದು ಹೇಳಿದರು.

Home add -Advt

“ಸತೀಶ ಅವರು ರಾಜಕೀಯದ ಜೊತೆಗೆ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ಸಮಾಜದ ಹಾಗೂ ವೈಯಕ್ತಿಕ ಸಮಸ್ಯೆಗಳನ್ನು ಕೂಡ ಬಗೆಹರಿಸುವ ಮೂಲಕ ಅವರು ಈ ಭಾಗದ ಜನರ ವಿಶ್ವಾಸ ಗಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಅವರಿಗೆ ಮತ ನೀಡುವ ಮೂಲಕ, ಅವರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳಿಸೋಣ” ಎಂದರು.

ಗೋಕಾಕ ಹಾಗೂ ಅರಬಾವಿ ಕ್ಷೇತ್ರಗಳ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಕಾಂಗ್ರೆಸ್ ನಿಂದ ದೇಶದ ಬದಲಾವಣೆ ಅಸಾಧ್ಯ: ಜಗದೀಶ್ ಶೆಟ್ಟರ್ ವಾಗ್ದಾಳಿ

Related Articles

Back to top button