Belagavi NewsBelgaum NewsKannada NewsKarnataka NewsLatest

*ಕೆರಗೋಡು ಗ್ರಾಮದ ಬಳಿಕ ಬೆಳಗಾವಿಗೂ ಆವರಿಸಿದ ಧ್ವಜ ವಿವಾದ*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ವಿವಾದದ ಬಳಿಕ ಇದೀಗ ಬೆಳಗಾವಿಯಲ್ಲಿಯೂ ಇದೇ ವಿವಾದ ಆರಂಭವಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದಕ್ಕೆ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ವಾರದ ಹಿಂದೆ ಗ್ರಾಮದಲ್ಲಿ ಹಾಕಿದ್ದ ಹನುಮ ಧ್ವಜವನ್ನು ಪಟ್ಟಣ ಪಂಚಾಯ್ತಿ ಸಿಬ್ಬಂದಿ ತೆರವು ಮಾಡಿದ್ದರು. ಮತ್ತೆ ಹನುಮ ಧ್ವಜ ಹಾರಿಸುವುದಾಗಿ ಗ್ರಾಮದ ಯುವಕರು ಪಟ್ಟು ಹಿಡಿದಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Home add -Advt

ಘಟನೆ ಹಿನ್ನೆಲೆಯಲ್ಲಿ ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ.


Related Articles

Back to top button