Belagavi NewsBelgaum News
*ಬೆಳಗಾವಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಭೀಕರ ಕೊಲೆ*

ಪ್ರಗತಿವಾಹಿನಿ ಸುದ್ದಿ: ತೆಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿ ಓರ್ವನನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದು, ಕೊಲೆಯ ಭೀಕರತೆಗೆ ಜನ ಬೆಚ್ಚಿಬಿದಿದ್ದಾರೆ.
ಯಕ್ಸಂಬಾ ಪಟ್ಟಣದಲ್ಲಿ ಇಂದು ಬೆಳಗ್ಗೆ ಮೂರು ಗಂಟೆ ಸುಮಾರಿಗೆ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಯಕ್ಸಂಬಾ ಪಟ್ಟಣದ ನಿವಾಸಿ ಮಹೇಶ ಕುರ್ಣಿ (48) ಕೊಲೆಯಾದ ವ್ಯಕ್ತಿ ಯಾಗಿದ್ದು, ಯಕ್ಸಂಬಾ ಪಟ್ಟಣದ ಬಿರೇಶ್ವರ ಕಾಲನಿ ಬಳಿ ಮಹೇಶ ಕುರ್ಣಿ ಭೀಕರ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸದಲಗಾ ಪೋಲಿಸರು ಬೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.




