Belagavi NewsBelgaum NewsKannada NewsKarnataka NewsLatestUncategorized

*ದೇವಸ್ಥಾನಕ್ಕೆ ಬಂದಿದ್ದ ನವದಂಪತಿ; ದುಷ್ಕರ್ಮಿಗಳಿಂದ ಪತಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಮವಾಸ್ಯೆ ನಿಮಿತ್ತ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಶಂಕರ್ ಸಿದ್ದಪ್ಪ ಜಗಮಟ್ಟಿ(27) ಕೊಲೆಯಾದ ವ್ಯಕ್ತಿ. ಅಮವಾಸ್ಯೆ ನಿಮಿತ್ತ ದಂಪತಿ ಸಮೇತ ಬನಸಿದ್ದೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದರು. ಕಳೆದ ಐದು-ಆರು ತಿಂಗಳ ಹಿಂದೆ ಮದುವೆಯಾಗಿದ್ದ ಶಂಕರ ಜಗಮಟ್ಟಿಯನ್ನು ದೇವಸ್ಥಾನದ ಆವರಣದಲ್ಲಿಯೇ ಭೀಕರವಾಗಿ ಹತ್ಯೆ ಮಾಡಿದ್ದಾರೆ.


ಕೊಲೆಯ ಹಿಂದೆ ಪತ್ನಿಯ ಪ್ರೀಯಕರ ಕೈವಾಡ ಇರೋ ಶಂಕೆ ವ್ಯಕ್ತವಾಗಿದ್ದು, ಮೂಡಲಗಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಎಸ್ಪಿ ಡಾ. ಸಂಜೀವ ಪಾಟೀಲ್ ಸ್ಥಳಕ್ಕೆ ದೌಡಾಯಿಸಿದ್ದಾರೆ.

Home add -Advt

Related Articles

Back to top button