Kannada NewsLatest

ಬೆಳಗಾವಿ ಮುಜರಾಯಿ ತಹಶೀಲ್ದಾರ್ ದಶರಥ ಎಸಿಬಿ ಬಲೆಗೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅನುದಾನ ಬಿಡುಗಡೆಗೆ ಲಂಚ ಕೇಳಿದ್ದ ಬೆಳಗಾವಿ ಮುಜರಾಯಿ ಇಲಾಖೆ ತಹಶೀಲ್ದಾರ್ ಹಾಗೂ ಆತನ ಸಂಬಂಧಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಮುಜರಾಯಿ ತಹಶೀಲ್ದಾರ್ ದಶರಥ ನಕುಲ ಜಾದವ ಹಾಗೂ ಆತನ ಸಂಬಂಧಿ ಸಂತೋಷ ಕಡೋಲಕರ ಬಂಧಿತ ಆರೋಪಿಗಳು.

Home add -Advt

ರಾಮದುರ್ಗದಲ್ಲಿನ ಯಕಲಮ್ಮ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯಿಂದ 4 ಲಕ್ಷ ಮಂಜೂರಾಗಿತ್ತು. ಅನುದಾನ ಬಿಡುಗಡೆಗಾಗಿ ತಹಶೀಲ್ದಾರ್ ದಶರಥ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವಿಚಾರವಾಗಿ ದೇವಸ್ಥಾನದ ಸುಭಾಷ ಗೋಡಕೆ ಎಸಿಬಿಗೆ ದೂರು ನೀಡಿದ್ದರು.

ಮಿಂಚಿನ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಇದೀಗ ರೆಡ್ ಹ್ಯಾಂಡ್ ಆಗಿ ತಹಶೀಲ್ದಾರ್ ಹಾಗೂ ಆತನ ಸಂಬಂಧಿಯನ್ನು ಬಂಧಿಸಿದ್ದಾರೆ.
ಗ್ರಾಹಕರಿಗೆ ಡಬಲ್ ಬೆಲೆ ಏರಿಕೆ ಹೊರೆ; ಕೊರೋನಾ ಸಂಕಷ್ಟದ ಮಧ್ಯೆಯೇ ಕಿಸೆಗೆ ಕತ್ತರಿ?

Related Articles

Back to top button