
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಂತೆ ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ 6 ಜನರು ನದಿಗೆ ಹಾರಿದ್ದು, ಅವರಲ್ಲಿ ಇಬ್ಬರು ನಾಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಮದುರ್ಗದ ಹೊರವಲಯದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರ ದಾಳಿಯಿಂದ ಭಯಗೊಂಡ 6 ಯುವಕರು ಮಲಪ್ರಭಾ ನದಿಗೆ ಹಾರಿದ್ದಾರೆ. ಇವರಲ್ಲಿ ನಾಲ್ವರು ಈಜಿ ದಡ ಸೇರಿದ್ದರೆ ಉಳಿದ ಇಬ್ಬರು ನಪತ್ತೆಯಾಗಿದ್ದಾರೆ ಎನ್ನಲಾಗಿದೆ.
ನಾಪತ್ತೆಯಾದವರನ್ನು ಮಂಜು ಹಾಗೂ ಸಮೀರ್ ಎಂದು ಗುರುತಿಸಲಾಗಿದ್ದು, ನದಿಗೆ ಹಾರಿದವರ ಪತ್ತೆಗೆ ಶೋಧ ನಡೆದಿದೆ.