Kannada NewsLatest

ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದ ಮುತಾಲಿಕ್

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಈಗಾಗಾಲೇ ಬಿಜೆಪಿ ನಾಯಕರ ಜೊತೆ ಮೂರು ಸುತ್ತಿನ ಮಾತುಕತೆ ನಡೆಸಲಾಗಿದೆ. ನಾಯಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜಕಾರಣದಲ್ಲಿ ಜಾತಿ, ಹಣ ಎಲ್ಲ ಇರುವುದರಿಂದ ಶೇ.80ರಷ್ಟು ನನಗೇ ಟಿಕೆಟ್ ಸಿಗುವ ಭರವಸೆ ಇದೆ ಎಂದರು.

Home add -Advt

ಒಂದು ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷ ಯಾರಿಗೆ ಟಿಕೆಟ್ ನೀಡುತ್ತೋ ಅವರ ಪರ ಕೆಲಸ ಮಾಡುತ್ತೇನೆ. ಕಳೆದ 40 ವರ್ಷಗಳಿಂದ ಹಿಂದುತ್ವದ ಪರ ಕೆಲಸಮಾಡಿದ್ದು, ಸೇವೆ ಮಾಡಲು ಪಕ್ಷ ಅವಕಾಶ ನೀಡಬೇಕು ಎಂದು ಹೇಳಿದರು.

 

Related Articles

Back to top button