Kannada NewsKarnataka NewsLatest

ಹೊಸ ವರ್ಷ ಸಂಭ್ರಮಕ್ಕೆ ಬ್ರೇಕ್: ಸಚಿವ ಆರ್.ಅಶೋಕ್

 

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಈ ಬಾರಿ ಹೊಸ ವರ್ಷ ಸಂಭ್ರಮಾಚರಣೆಗೆ ಅವಕಾಶವಿಲ್ಲ, ವಿಪತ್ತು ನಿರ್ವಹಣಾ ಕಾಯ್ದೆಯಡಿ ಸಂಭ್ರಮಾಚರಣೆ ರದ್ದು ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ಗೆ ಈ ಬಾರಿ ಬ್ರೇಕ್ ಹಾಕಲಾಗಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಕೂಡ ಸಮ್ಮತಿಸಿದ್ದಾರೆ. ಇದು ಕೇವಲ ಬೆಂಗಳೂರಿನ ಬ್ರಿಗೇಡ್ ರೋಡ್, ಎಂ.ಜಿ.ರೋಡ್ ಗಳಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ. ಈ ಬಾರಿ ಹೊಸ ವರ್ಷ ಸಂಭ್ರಮಾಚರಣೆ ನಿಷೇಧಿಸಲಾಗಿದೆ ಎಂದರು.

Home add -Advt

ಹೋಟೆಲ್, ಪಬ್, ಬಾರ್ ಗಳಲ್ಲಿ ಪಾರ್ಟಿ ಮಾಡಬಹುದು. ಆದರೆ ಶೇ.50ರಷ್ಟು ಸಾಮರ್ಥ್ಯ ಮೀರುವಂತಿಲ್ಲ. ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button