Latest
BEO ಕಚೇರಿ ಸೂಪರಿಂಟೆಂಡೆಂಟ್ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ಮಂಗಳೂರಿನ ಬಿಇಒ ಕಚೇರಿ ಸೂಪರಿಂಟೆಂಡೆಂಟ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.
45 ವರ್ಷದ ಶಿವಾನಂದ್ ಆತ್ಮಹತ್ಯೆಗೆ ಶರಣಾದವರು. ಮಡಿಕೇರಿಯ ವಸತಿ ಗೃಹದಲ್ಲಿ ಶಿವಾನಂದ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳೂರಿನ ಬಿಇಒ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಾನಂದ್ ಏಕಾಏಕಿ ಆತ್ಮಹತ್ಯೆಗೆ ಶರಣಾಗಲು ನಿಖರ ಕಾರಣ ತಿಳಿದುಬಂದಿಲ್ಲ.
ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ಕತ್ತಿ ಸಾವಿನ ದುಃಖದಿಂದ ಹೃದಯಾಘಾತವಾಗಿ ಕುಸಿದ ಬಿದ್ದ ವ್ಯಕ್ತಿ; ಸಮಯ ಪ್ರಜ್ಞೆಯಿಂದ ಬದುಕುಳಿಸಿದ ಅಥಣಿ ಡಿಎಸ್ಪಿ ಶ್ರೀಪಾದ ಜಲ್ದೆ
https://pragati.taskdun.com/local/man-collapse-sugar-factory-athani-dsp-shripadjalde-cpr-recover/




