Belagavi NewsBelgaum NewsPolitics

*4.90 ಕೋಟಿ ರೂ. ವೆಚ್ಚದಲ್ಲಿ ಸಹ್ಯಾದ್ರಿ ನಗರ ಜಂಕ್ಷನ್ ಗಳ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಹ್ಯಾದ್ರಿ ನಗರದ ಜಂಕ್ಷನ್ ಗಳ ಹಾಗೂ ಸಂಪರ್ಕ ರಸ್ತೆಗಳ ಸುಧಾರಣೆಯ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

Home add -Advt

ಸುಮಾರು 4.90 ಕೋಟಿ ರೂ. ವೆಚ್ಚದಲ್ಲಿ ಜಂಕ್ಷನ್ ಗಳ ಹಾಗೂ ಸಂಪರ್ಕ ರಸ್ತೆಗಳ ಕಾಮಗಾರಿ ನಡೆಯಲಿದೆ. ಮಹಾಬಳೇಶ್ವರ ದೇವಸ್ಥಾನ ಹಾಗೂ‌ ಮಹಾಲಕ್ಷ್ಮೀ ದೇವಸ್ಥಾನ ಹತ್ತಿರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ವಿಶೇಷ ಪ್ರಯತ್ನದಿಂದ ಸಚಿವರು ಅನುದಾನ ಮಂಜೂರು ಮಾಡಿಸಿದ್ದು, ವಿಶಾಲವಾಗಿರುವ ಸಹ್ಯಾದ್ರಿ ನಗರದ ಸೌಂದರ್ಯೀಕರಣ ಮತ್ತು ಅಭಿವೃದ್ಧಿಗೆ ಇದೊಂದು ಕ್ರಾಂತಿಕಾರಿ ಬೆಳವಣಿಗೆಯಾಗಿದೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ತೊಡಕಲಕಟ್ಟಿ, ಮುಸ್ತಾಕ್ ಮುಲ್ಲಾ, ವನಿತಾ ಗೊಂದಳಿ, ಸಂಗೀತಾ, ಪಿಕೆ ಪಾಟೀಲ, ಹಿರೇಮಠ್, ಸುರೇಶ ಜಡಗಿ, ಬಸವರಾಜ ಡೂಗನವರ್, ಸಂಜೀವ್ ದೇಸಾಯಿ ಮುಂತಾದವರು ಉಪಸ್ಥಿತರಿದ್ದರು.

Related Articles

Back to top button