Belagavi NewsBelgaum News

*ಮಕ್ಕಳೊಂದಿಗೆ ತಾಯಿ ನದಿಗೆ ಹಾರಿ ಆತ್ಮಹತ್ಯೆ ಪ್ರಕರಣ: ರಕ್ಷಿಸಲ್ಪಟ್ಟ ಮತ್ತೋರ್ವ ಮಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಕುಡುಕ ಗಂಡನ ಹಿಂಸೆಗೆ ಬೇಸತ್ತ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿತ್ತು.

Home add -Advt

ಕೃಷ್ಣಾನದಿಗೆ ಹಾರಿದ್ದ ಮಹಿಳೆ ಶಾರದಾ, ಇಬ್ಬರು ಮಕ್ಕಳಾದ ಆದರಶ, ಅಮೃತಾ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ನದಿಗೆ ಹಾರುದ್ದನ್ನು ಕಂಡ ಸ್ಥಳೀಯರು ತಕ್ಷಣ ಓರ್ವ ಬಾಲಕಿಯನ್ನು ರಕ್ಷಿಸಿದ್ದರು. ರಕ್ಷಿಸಲ್ಪಟ್ಟ ಅನುಕ್ಷಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅನುಕ್ಷಾ ಕೊನೆಯುಸಿರೆಳೆದಿದ್ದಾಳೆ.

ಪತಿ ಅಶೋಕ್ ಪ್ರತಿದಿನ ಕುಡಿದುಬಂದು ಪತ್ನಿ ಹಾಗೂ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ತೀವ್ರವಾಗಿ ನೊಂದ ಶಾರದ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Related Articles

Back to top button