Belagavi NewsBelgaum NewsKannada NewsKarnataka NewsLatest
*ಮದುವೆ ಸಮಾರಂಭಕ್ಕೆ ಬಂದವರೇ ಈತನ ಟಾರ್ಗೆಟ್; ಖತರ್ನಾಕ್ ಕಳ್ಳ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮದುವೆ ಸಮಾರಂಭಕ್ಕೆ ಬಂದಿದ್ದವರನ್ನೇ ಟಾರ್ಗೆಟ್ ಮಾಡಿ ಕಲ್ಯಾಣ ಮಂಟಪದಲ್ಲಿ ಕಳ್ಳತನ ಮಾಡಿದ್ದ ಖತರ್ನಾಕ್ ಕಳ್ಳನನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇಮ್ತಿಯಾಜ್ ಮಹಮ್ಮದ್ ಗೌಸ್ ಹುಬ್ಳಿವಾಲೆ (63) ಬಂಧಿತ ಆರೋಪಿ. ವೀರಭದ್ರ ನಗರದ ನಿವಾಸಿಯಾಗಿರುವ ಈತ ಜನವರಿ 4 ರಂದು ಮಾಳಮಾರುತಿ ಠಾಣಾ ವ್ಯಾಪ್ತಿಯ ವಿದ್ಯಾಧಿರಾಜ ಕಲ್ಯಾಣ ಮಂಟಪದಲ್ಲಿ ಮದುವೆಗೆ ಆಗಮಿಸಿದ್ದ ದಾವಣಗೆರೆ ಮೂಲದ ಪಂಚಾಕ್ಷರಿ ಎಂ ಕೆ ಅವರ ಪತ್ನಿಯ ಚಿನ್ನಾಭರಣ ಕಳುವು ಮಾಡಿದ್ದ.
ವೆನಿಟಿ ಬ್ಯಾಗಿನಲ್ಲಿ ಇಟ್ಟಿದ್ದ ಸುಮಾರು 3,51,000 ಮೌಲ್ಯದ ಬಂಗಾರದ ಆಭರಣ ಹಾಗೂ 3,500/- ಹಣ ಸೇರಿದಂತೆ ಒಟ್ಟು 3,54, 500 ಗಳಷ್ಟು ವಸ್ತುಗಳನ್ನು ವೆನಿಟಿ ಬ್ಯಾಗ್ ಸಮೇತ ಕದ್ದು ಪರಾರಿಯಾಗಿದ್ದ. ಚಿನ್ನಾಭರಣ ಹಾಗೂ ಹಣ ಕಳುವಾದ ಬಗ್ಗೆ ಮಾಳಮಾರುತಿ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿಯನ್ನು ಬಂಧಿಸಿರುವ ಪೊಲೀಸರು, ಕದ್ದ ಬಂಗಾರದ ಆಭರಣ ಹಾಗೂ ಹಣವನ್ನು ಜಪ್ತಿ ಮಾಡಿದ್ದಾರೆ.