Belagavi NewsBelgaum NewsPolitics

*ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸುವರ್ಣ ಸೌಧದಲ್ಲಿ 16ನೇ ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭವಾಗಿದೆ.

ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದಿನಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ. ವಿಧಾನ ಪರಿಷತ್ ಹಾಗೂ ವಿಧಾನಸಭೆಯಲ್ಲಿ ಮೊದಲು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಪರಿಷತ್ ನಲ್ಲಿ ಅಲಾಪ ಆರಂಭವಾಗಿದೆ.

Home add -Advt

ವಿಧಾನಸಭೆಯಲ್ಲಿ ನೂತನ ಶಾಸಕರಾಗಿ ಸಿ.ಪಿ.ಯೋಗೇಶ್ವರ್, ಯಾಸೀರ್ ಪಠಾಣ್, ಅನ್ನಪೂರ್ಣ ಪ್ರಮಾಣವಚನ ಸ್ವೀಕರಿಸಿದರು.

ಅಧಿವೇಸನದ ಮೊದಲ ದಿನವಾದ ಇಂದು ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ, “ವಿಶ್ವದ ಮೊದಲ ಸಂಸತ್ತು” ಎಂಬ ಖ್ಯಾತಿಯ, “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರ ಕೆಲವೇ ಕ್ಷಣಗಳಲ್ಲಿ ಅನಾವರಣಗೊಳ್ಳಲಿದೆ.

Related Articles

Back to top button