Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ನಡುರಸ್ತೆಯಲ್ಲಿಯೇ ಯುವಕನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಯುವಕನೊಬ್ಬನನ್ನು ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಶಿವಬಸವನಗರದಲ್ಲಿ ನಡೆದಿದೆ.

ಯುವಕನನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ನಡುರಸ್ತೆಯಲ್ಲಿಯೇ ಹತ್ಯೆಗೈದಿದ್ದಾರೆ. ಸಿಸಿಟಿವಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ. 26 ವರ್ಷದ ನಾಗರಾಜ್ ಗಾಡಿವಡ್ಡರ್ ಮೃತ ಯುವಕ.

Related Articles

ತಡರಾತ್ರಿ ಶಿವಬಸವನಗರದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ ಮೂವರು ದುಷ್ಕರ್ಮಿಗಳು ಯುವಕನ ತಲೆಗೆ ಹಿಂದಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಕೃತ್ಯದ ಬಳಿಕ ದುಷ್ಕರ್ಮಿಗಳು ಒಬ್ಬೊಬ್ಬರು ಒಂದೊಂದು ದಿಕ್ಕಿಗೆ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಡಿಸಿಪಿ ಶೇಖರ್, ಎ ಸಿಪಿ ಕಟ್ಟಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt


Related Articles

Back to top button