Kannada NewsKarnataka News

ಬೆಳಗಾವಿ: ಕೊಳವೆ ಬಾವಿಯಲ್ಲಿ 2 ವರ್ಷದ ಕಂದಮ್ಮ

ಪ್ರಗತಿವಾಹಿನಿ ಸುದ್ದಿ, ಹಾರೂಗೇರಿ – ರಾಯಬಾಗ ತಾಲೂಕಿನ ಅಲಕನೂರಿನ 2 ವರ್ಷದ ಕಂದಮ್ಮ ಕೊಳವೆ ಬಾವಿಯಲ್ಲಿ ಸಿಕ್ಕಿಕೊಂಡಿದೆ.

ಶುಕ್ರವಾರವೇ ಬಾಲಕ ಶರತ್ ಸಿದ್ದಪ್ಪ ಹಸಿರೆ ನಾಪತ್ತೆಯಾಗಿದ್ದು, ಮಗುವಿನ ಅಪಹರಣವಾಗಿದೆ ಎಂದು ಶಂಕಿಸಲಾಗಿತ್ತು. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಾಗಿತ್ತು.

Home add -Advt

ಆದರೆ ಇಂದು ಬಾಲಕ ಕೊಳವೆ ಬಾವಿಯಲ್ಲಿ ಬಿದ್ದಿರುವುದು ಗೊತ್ತಾಗಿದೆ. ಇದೀಗ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ. ಸುಮಾರು 10 -12 ಅಡಿ ಆಳದಲ್ಲಿ ಮಗು ಸಿಕ್ಕಿಬಿದ್ದಿರಬಹುದು ಎಂದು ಶಂಕಿಸಲಾಗಿದೆ.

ಮಗುವಿನ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆಗೆ ಕ್ರಮ ತೆಗೆದುಕೊಳ್ಳಲಾಗಿದೆ.

ತೀವ್ರ ಕಾರ್ಯಾಚರಣೆ ನಡೆಸಿ ಬಾಲಕನ ರಕ್ಷಣೆಗೆ ಎಲ್ಲ ರೀತಿ ಕ್ರಮ ತೆಗೆದುಕೊಳ್ಳುವಂತೆ ಸಂಸದ ಅಣ್ಣಾ ಸಾಹೇಬ ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಭೀಕರ ರಸ್ತೆ ಅಪಘಾತ; ಮಗು ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ

Related Articles

Back to top button