Kannada NewsKarnataka NewsLatest

ಬೆಳಗಾವಿ ಜಿಲ್ಲಾಧಿಕಾರಿ ಬದಲಾವಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ.

ಡಾ.ಕೆ.ಹರೀಶ್ ಕುಮಾರ ಬೆಳಗಾವಿಯ ನೂತನ ಜಿಲ್ಲಾಧಿಕಾರಿಗಳಾಗಿದ್ದಾರೆ. ಹರೀಶ್ ಕುಮಾರ ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಆಯುಕ್ತರಾಗಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ಕಾರವಾರ ಜಿಲ್ಲಾಧಿಕಾರಿಗಳಾಗಿಯೂ ಕೆಲಸಮಾಡಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಎಂ.ಜಿ.ಹಿರೇಮಠ ಬೆಳಗಾವಿ ಜಿಲ್ಲೆಯವರಾಗಿರುವುದರಿಂದ ಅವರನ್ನು ಚುನಾವಣೆ ಸಂದರ್ಭದಲ್ಲಿ ವರ್ಗಾಯಿಸಲಾಗಿದೆ.

ಉಪಚುನಾವಣೆ: ನಾಳೆಯಿಂದಲೇ ನಾಮಪತ್ರ ಸಲ್ಲಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button