Kannada NewsKarnataka NewsLatest
ರಾಜಭವನ ಚಲೋಕ್ಕೆ ಬೆಳಗಾವಿ ರೈತರು: ಬಸ್ ನಲ್ಲೇ ತೆರಳಿದ ಶಾಸಕಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಂಗಳೂರಿನಲ್ಲಿ ಜ.20ರಂದು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ರಾಜಭವನ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇತೃತ್ವದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ನೂರಾರು ರೈತರು ತೆರಳಿದ್ದಾರೆ.
ಮಂಗಳವಾರ ಮಧ್ಯಾಹ್ನ ಇಲ್ಲಿನ ಶಾಸಕರ ಕಚೇರಿಯಿಂದ ಬಸ್ ನಲ್ಲಿ ರೈತರು ಪ್ರಯಾಣ ಬೆಳೆಸಿದರು. ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕೂಡ ಬಸ್ ನಲ್ಲೇ ತೆರಳಿದ್ದಾರೆ.ಭಾರತ ದೇಶ ರೈತರ ದೇಶ. ರೈತರ ಮೇಲೆಯೇ ಅವಲಂಬಿಸಿರುವ ದೇಶ. ರೈತರನ್ನು ಕಡೆಗಣಿಸಿದರೆ ದೇಶಕ್ಕೆ ಉಳಿಗಾಲವಿಲ್ಲ. ಕಾಂಗ್ರೆಸ್ ಪಕ್ಷ ಸದಾ ರೈತರ ಪರವಾಗಿಯೇ ನಿಲ್ಲುತ್ತದೆ. ರೈತರಿಗಾಗಿಯೇ ಹೋರಾಡುತ್ತದೆ. ಆದರೆ ಕೇಂದ್ರದ ಬಿಜೆಪಿ ಸರಕಾರ ರೈತವಿರೋಧಿ ಕಾಯ್ದೆ ಜಾರಿಗೊಳಿಸಿದೆ. ಅದರ ವಿರುದ್ಧ ಬುಧವಾರ ಕಾಂಗ್ರೆಸ್ ಪಕ್ಷ ರಾಜಭವನ ಚಲೋ ಹಮ್ಮಿಕೊಂಡಿದ್ದು, ಬೆಳಗಾವಿಯಿಂದ ನೂರಾರು ರೈತರು ಪಾಲ್ಗೊಳ್ಳಲಿದ್ದಾರೆ. ಅದಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ತಿಳಿಸಿದರು.





