Belagavi NewsBelgaum NewsKannada NewsKarnataka NewsLatestPolitics

ಬೆಳಗಾವಿಗೆ ಮತ್ತೊಂದು ಸಂಪುಟ ದರ್ಜೆ ಸ್ಥಾನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರನ್ನು ದೆಹಲಿಯ ಕರ್ನಾಟಕದ ಪ್ರತಿನಿಧಿ-2 ಆಗಿ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ನೇಮಕ ಮಾಡಲಾಗಿದೆ.

ಇದರೊಂದಿಗೆ ಬೆಳಗಾವಿ ಜಿಲ್ಲೆಗೆ ಮತ್ತೊಂದು ಸಂಪುಟ ದರ್ಜೆ ಸ್ಥಾನಮಾನ ಸಿಕ್ಕಿದಂತಾಗಿದೆ. ಈಗಾಗಲೆ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಸಂಪುಟ ದರ್ಜೆ ಸಚಿವರಾಗಿದ್ದಾರೆ.

ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡ ಅವರನ್ನು ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರಾಗಿ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ನೇಮಕಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

Home add -Advt

Related Articles

Back to top button