Kannada NewsLatest

ಮರಾಠ ಸಮಾಜದ ಭವ್ಯ ಶೋಭಾಯಾತ್ರೆ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ಶ್ರೀಮಂತ ಪಾಟೀಲ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಸಕಲ ಮರಾಠಾ ಸಮಾಜ ಬೆಳಗಾವ ವತಿಯಿಂದ ಆಯೋಜಿಸಲಾದ ಮರಾಠಾ ಸ್ವಾಮಿ ಗುರು ಜಗದ್ಗುರು ವೇದಾಂತಚಾರ್ಯ ಶ್ರೀ ಶ್ರೀ ಮಂಜುನಾಥ ಭಾರತಿ ಸ್ವಾಮಿಜಿ ಅವರ ಭವ್ಯ ಶೋಭಾಯಾತ್ರೆ ಹಾಗೂ ಗುರುವಂದನೆ ಸಮಾರಂಭದಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕ ಶ್ರೀಮಂತ (ತಾತ್ಯಾ) ಪಾಟೀಲ ಅವರು ಭಾಗವಹಿಸಿ, ಹಿಂದವೀ ಸ್ವರಾಜ್ಯ ಸ್ಥಾಪಕ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿ, ಶೋಭಾಯಾತ್ರೆ ಹಾಗೂ ಗುರುವಂದನೆ ಸಮಾರಂಭದಲ್ಲಿ ಪಾಲ್ಗೊಂಡರು.

ಮರಾಠಾ ಸಮಾಜದ ಬಾಂಧವರು ಶೈಕ್ಷಣಿಕ ಸಾಮಾಜಿಕ ಹಾಗೂ ವಿವಿಧ ಕ್ಷೇತ್ರದಲ್ಲಿ ನಮ್ಮ ಸಮಾಜ ಅಭಿವೃದ್ಧಿಯಾಗಬೇಕಾಗಿದೆ, ಆದ್ದರಿಂದ ನಾವೆಲ್ಲರೂ ಒಂದಾಗಿರಬೇಕೆಂದರು.

Home add -Advt

ಈ ಸಮಯದಲ್ಲಿ ಶಾಸಕರಾದ ಅನಿಲ ಬೆನಕೆ, ಅಂಜಲಿ ನಿಂಬಾಳಕರ ಹಾಗೂ ಹಲವಾರು ಸ್ವಾಮೀಜಿಗಳು, ಮರಾಠಾ ಸಮಾಜದ ಹಲವಾರು ಗಣ್ಯರು, ಮುಖಂಡರು ಮತ್ತು ಸಮಾಜದ ಬಾಂಧವರು ಉಪಸ್ಥಿತರಿದ್ದರು.
ಭಾರತೀಯ ಸಂಸ್ಕೃತಿ, ಕಲೆ, ಪರಂಪರೆ ಬಿಂಬಿಸುವ ಕಾರ್ಯ ಧಾರವಾಡ ರಂಗಾಯಣ ಮಾಡುತ್ತಿದೆ: ವೈಶಾಲಿ ಬ್ಯಾಳಿ

Related Articles

Back to top button