Karnataka News
*ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದನಾ ಪತಿ?*

ಪ್ರಗತಿವಾಹಿನಿ ಸುದ್ದಿ: ಅನುಮಾನಾಸ್ಪದವಾಗಿ ರಾಜಸ್ಥಾನ ಮೂಲದ ದಂಪತಿ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಶಂಕರ್ ರಾಮ್ (40) ಹಾಗೂ ಶಂತಿದೇವಿ (34) ಮೃತ ದಂಪತಿ. ಪತ್ನಿ ಶಾಂತಿ ದೇವಿಯನ್ನು ಕೊಂದು ಶಂಕರ್ ರಾಮ್ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಬಳ್ಳಾರಿಯಲ್ಲಿ ಜೀನ್ಸ್ ಅಂಗಡಿ ಇಟ್ಟುಕೊಂಡಿದ್ದ ಶಂಕರ್ ರಾಮ್ ದಂಪತಿ ಇದೀಗ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಬಳ್ಳಾರಿ ಬ್ರೂಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


