Latest

ತಂದೆ-ತಾಯಿ ಕೊರೊನಾಗೆ ಬಲಿ; ಇಬ್ಬರು ಮಕ್ಕಳು ಅನಾಥ

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ; ತಂದೆ-ತಾಯಿ ಇಬ್ಬರು ಒಂದೇ ದಿನದ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಮಕ್ಕಳಿಬ್ಬರು ಅನಾಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಇಂದಿರಾನಗರ ಬಡಾವಣೆಯಲ್ಲಿ ನಡೆದಿದೆ.

ಮಾರೆಪ್ಪ (55) ಉಮಾ (44) ಮೃತ ದಂಪತಿ. ವಾರದ ಹಿಂದೆ ದಂಪತಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರೂ ಸಾವನ್ನಪ್ಪಿದ್ದಾರೆ.

ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಮಕ್ಕಳಿಬ್ಬರೂ ಅನಾಥರಾಗಿದ್ದಾರೆ.
ಪಿಯುಸಿ ಪರೀಕ್ಷೆ ರದ್ದು – ಸುರೇಶ ಕುಮಾರ ಘೋಷಣೆ

Home add -Advt

Related Articles

Back to top button