Kannada NewsKarnataka NewsPolitics
*ಬೆಂಕಿ ದುರಂತ ಪ್ರಕರಣ; ಕಟ್ಟಡ ಮಾಲೀಕ ಸೇರಿ ಇಬ್ಬರೂ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಕಟ್ಟದದ ಮಾಲೀಕ ಹಾಗೂ ಆತನ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಅನಧಿಕ್ಋತ ನಿರ್ಮಾಣ ಕಾಮಗಾರಿ ಹಾಗೂ ಸುರಕ್ಷತಾ ಕ್ರಮ ಕೊರತೆ, ಅಗ್ನಿ ಸುರಕ್ಷಾ ಮುನ್ನೆಚ್ಚರಿಕೆ ಅನುಷ್ಠಾನಗೊಳಿಸದ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದ್ದು, ಕಟ್ಟದ ಮಾಲೀಕ ಬಾಲಕೃಷ್ಣ ಶೆಟ್ಟಿ ಹಾಗೂ ಮಗ ಸಂದೀಪ್ ಶೆಟ್ಟಿಯನ್ನು ಬಂಧಿಸಲಾಗಿದೆ.



