Kannada NewsKarnataka NewsLatest

*7.11 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಸ್ಟರ್ ಮೈಂಡ್ ಕಾನ್ಸ್ ಟೇಬಲ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಡೇರಿ ಸರ್ಕಲ್ ಬಳಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಸ್ಟರ್ ಮೈಂಡ್ ನನ್ನು ಬಂಧಿಸಿದ್ದಾರೆ. ದರೋಡೆ ಪ್ರಕರಣದಲ್ಲಿ ಪೊಲೀಸಪ್ಪನೇ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ತನಿಖೆ ಚುರುಕುಗೊಳಿಸಿರುವ ಪೊಲೀಸರು ಕೆಲ ಶಂಕಿತರನ್ನು ಬಂಧಿಸಿದ್ದಾರೆ. ಅವರಲ್ಲಿ ಓರ್ವ ಪೊಲೀಸ್ ಕಾನ್ಸ್ ಟೆಬಲ್ ಕೂಡ ಇದ್ದಾರೆ. ಪೊಲೀಸ್ ಪೇದೆಯೇ ಈ ದರೋಡೆ ಪ್ರಕರಣದ ರೂವಾರಿ. ಆತನೇ ದರೋಡೆಕೋರರ ಗ್ಯಾಂಗ್ ಗೆ ಮಾಹಿತಿ ನೀಡಿ ದರೋಡೆ ನಡೆಸಿದ್ದಾನೆ ಎನ್ನಲಾಗಿದೆ.

ಕಾನ್ಸ್ ಟೇಬಲ್ ಅಣ್ಣಪ್ಪ ನಾಯ್ಕ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಕಳ್ಳರನ್ನು ಹಿಡಿಯಬೇಕಿದ್ದ ಪೊಲೀಸನೇ ದರೋಡೆ ಪ್ರಕರಣದ ರೂವಾರಿ ಎಂದು ಹೇಳಲಾಗುತ್ತಿದೆ.

Home add -Advt

Related Articles

Back to top button