Latest

*ನಾಳೆ ಬಹುತೇಕ ಪ್ರದೇಶಗಳಲ್ಲಿ ನೀರು ಸರಬರಾಜು ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ಜೂನ್ 19ರಂದು ನಾಳೆ ಬೆಂಗಳೂರುನ ಬಹುತೇಕ ಪ್ರದೇಶಗಳಲ್ಲಿ ನೀರು ಸರಬರಾಜು ಸ್ಥಗಿತಗೊಳ್ಳಲಿದೆ.

ಈ ಬಗ್ಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಹಿತಿ ನೀಡಿದೆ. ಜೂನ್ 19ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 20ರ ಬೆಳಿಗ್ಗೆ 6 ಗಂಟೆಯವರೆಗೆ ನಗರದ ಬಹುತೇಕ ಕಡೆಗಳಲ್ಲಿ ನೀರು ಸರಬರಾಜು ಸ್ಥಗಿತಗೊಳ್ಳಲಿದೆ.

ಕಾವೇರಿ 5ನೇ ಹಂತದ ಕಾಮಗಾರಿ ಹಾಗೂ ವಿದ್ಯುತ್ ನಿರ್ವಹಣೆಗೆ ಕಾವೇರಿ ನೀರು ಸರಬರಾಜು ಸ್ಥಗಿತ ಅನಿವಾರ್ಯ. ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1ರಿಂದ ಹಂತ 5ರವರೆಗಿನ ಎಲ್ಲಾ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬಿಡಬ್ಲ್ಯೂ ಎಸ್ ಎಸ್ ಬಿ ತಿಳಿಸಿದೆ.

Home add -Advt

Related Articles

Back to top button