Latest

*ಸತತ ಎರಡು ಗಂಟೆ ಸುರಿದ ಮಳೆಗೆ ಬೆಂಗಳೂರು ತತ್ತರ* *ಮತ್ತೆ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ 4:30 ರಿಂದ ಸುರಿದ ಭಾರಿ ಮಳೆಗೆ ಅಲಹವಾರು ಅವಾಂತರ ಸೃಷ್ಟಿಯಾಗಿದೆ. 

ಬೆಂಗಳೂರಿನಲ್ಲಿ ಬೆಳಗಿನ ಜಾವ 4.30 ಸುಮಾರಿಗೆ ಶುರುವಾದ ಮಳೆ, 6:30ವರೆಗೆ ಸಾಧಾರಣವಾಗಿ ಸುರಿದಿದೆ. ರಾಜರಾಜೇಶ್ವರಿ ನಗರ, ಎಚ್ ಎಸ್ ಆರ್ ಲೇಔಟ್, ಚಾಮರಾಜಪೇಟೆ, ಎಚ್ ಎಎಲ್, ಮೆಜೆಸ್ಟಿಕ್ ಮುಂತಾದ ಕಡೆಗಳಲ್ಲಿ ಮಳೆ ಆಗಿದೆ.‌ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿ ರಸ್ತೆಗಳು ಜಲಾವೃತವಾಗಿದೆ. ಇನ್ನು ಮಧ್ಯಾಹ್ನ 2 ಗಂಟೆಯ ನಂತರ ಬೆಂಗಳೂರಿನ ನಾನಾ ಪ್ರಾಂತ್ಯಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ವರುಣನ ಆರ್ಭಟಕ್ಕೆ ಹೆಬ್ಬಾಳ ಫೈಓವರ್ ಮೇಲೆ ನೀರು ನಿಂತಿದ್ದು ವಾಹನ ಸವಾರರು ನಿಧಾನವಾಗಿ ಸಾಗಬೇಕೆಂದು ಬೆಂಗಳೂರು ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button