Kannada NewsKarnataka NewsLatest
*ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ; 3 ಅಧಿಕಾರಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನರು ಸಜೀವ ದಹನಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಅಧಿಕರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಸೂಚಿಸಿದ್ದೇನೆ.
ತಹಶೀಲ್ದಾರ್, ಪಿಐ ಹಾಗೂ ಅಗ್ನಿಶಾಮಕ ಅಧಿಕಾರಿಯನ್ನು ಅಮಾನತು ಮಾಡಲು ಆದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.


