Karnataka News

*ನಿರ್ಮಾಣ ಹಂತದ ಕಟ್ಟಡ ಕುಸಿತ:ಮೂವರು ಸಾವು; ಮೂವರ ರಕ್ಷಣೆ*

ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

Home add -Advt

ಪ್ರಗತಿವಾಹಿನಿ ಸುದ್ದಿ: ವರುಣಾರ್ಭಟದ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನ ಘೋರ ದುರಂತ ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿಕೊಂಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಅವಶೇಷಗಳ ಅಡಿ ಸಿಲುಕಿದ್ದ ಮೂವರ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರ ತೆಗೆದಿದ್ದಾರೆ. ಮೂವರನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಕಟ್ಟಡದ ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಮಳೆ ನಡುವೆಯೇ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Related Articles

Back to top button