*ಪತ್ನಿಯನ್ನೇ ಕೊಲೆಗೈದು ಶವವನ್ನು ಬೆಡ್ ಶೀಟ್ ನಲ್ಲಿ ಸುತ್ತಿಟ್ಟು ಪರಾರಿಯಾದ ಪತಿ*

ಪ್ರಗತಿವಾಹಿನಿ ಸುದ್ದಿ: ಪತಿಮಹಾಶಯನೊಬ್ಬ ಪತ್ನಿಯನ್ನೇ ಹತ್ಯೆಗೈದು ಶವವನ್ನು ಬೆಡ್ ಶೀಟ್ ನಲ್ಲಿ ಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಗೇರುಪಾಳ್ಯದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ರಿಯಾಕುಮಾರಿ ಹತ್ಯೆಯಾದವರು. ಇವರ ಪತಿ ಧೀರಜ್ ಕುಮಾರ್ ಪರಾರಿಯಾಗಿದ್ದಾನೆ. ಈತನೇ ಕೃತ್ಯ ಎಸಗಿ ಎಸ್ಕೇಪ್ ಆಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆರ್.ಆರ್.ನಗರ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಪ್ರಕರಣ ದಾಖಲಿಸಿ, ಆರೋಪಿಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೇರುಪಾಳ್ಯದಲ್ಲಿರುವ ಲಕ್ಷ್ಮಣ್ … Continue reading *ಪತ್ನಿಯನ್ನೇ ಕೊಲೆಗೈದು ಶವವನ್ನು ಬೆಡ್ ಶೀಟ್ ನಲ್ಲಿ ಸುತ್ತಿಟ್ಟು ಪರಾರಿಯಾದ ಪತಿ*