Latest

ಭಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ; ಬೆಚ್ಚಿಬಿದ್ದ ಜಿಲ್ಲೆ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದ್ದು, ಇಡೀ ಜಿಲ್ಲೆಯಾದ್ಯಂತ ಪ್ರಕ್ಷುಬ್ಧವಾತಾವರಣ ನಿರ್ಮಾಣವಾಗಿದೆ.

ರಾತ್ರಿ 9:30ರ ಸಮಯದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಭಜರಂಗದಳ ಕಾರ್ಯಕರ್ತನನ್ನು ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ತೀರ್ಥಹಳ್ಳಿಗೆ ಹೋಗುವ ರಸ್ತೆ ಪಕ್ಕದ ಬಡಾವಣೆಯಲ್ಲಿ ಈ ಕೃತ್ಯ ನಡೆಸಲಾಗಿದೆ.

ಹತ್ಯೆಯಾದ ಯುವಕನನ್ನು ಹರ್ಷ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಬಂದಿದ್ದ 4-6 ಜನರ ಗುಂಪು ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕ ಮೃತಪಟ್ಟಿದ್ದಾನೆ.

ಸಿಗೇಹಟ್ಟಿ ಬಡಾವಣೆ ನಿವಾಸಿಯಾಗಿದ್ದ ಹರ್ಷ, ಐದು ವರ್ಷಗಳಿಂದ ಭಜರಂಗದಳದ ಸಕ್ರಿಯ ಕಾರ್ಯಕರ್ತನಾಗಿದ್ದ. ಈ ಹಿಂದೆ ಎರಡು ಬಾರಿ ಆತನ ಮೇಲೆ ದಾಳಿ ನಡೆದಿತ್ತು ಆದರೂ ಬಚಾವಾಗಿದ್ದ ಎನ್ನಲಾಗಿದೆ. ಆದರೆ ನಿನ್ನೆ ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ಬಲಿಯಾಗಿದ್ದಾನೆ. ಭಜರಂಗದಳ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಇಡೀ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

Home add -Advt

ಭಜರಂಗದಳ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಇಡೀ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.ಭಜರಂಗದಳ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತುರುಗುತ್ತಿದ್ದಂತೆ ಲಾಠಿಚಾರ್ಜ್ ಮಾಡಿರುವ ಪೊಲೀಸರು ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

Related Articles

Back to top button