Kannada NewsKarnataka NewsLatestPolitics

*BJP-JDSನವರಿಗೆ ಮೇಜರ್ ಆಪರೇಷನ್ ಮಾಡಬೇಕು ಎಂದು ಟಾಂಗ್ ನೀಡಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

Home add -Advt

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ, ಎರಡು ಪಕ್ಷದವರು ಹತಾಶೆಯಿಂದ ಮಾತನಾಡುತ್ತಿದ್ದಾರೆ. ಹಾಗಾಗಿ ಡಾಕ್ಟರ್ ಗಳೇ ಅವರಿಗೆ ಮೇಜರ್ ಸರ್ಜರಿ ಮಾಡಬೇಕು ಎಂದರು.

ಜಗದೀಶ್ ಶೆಟ್ಟರ್‌ ಹಾಗೂ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಹಾಗೆಲ್ಲ ಎಲ್ಲದರಲ್ಲೂ ಅನುಮಾನಪಡಲು ಆಗಲ್ಲ. ಜಗದೀಶ್ ಶೆಟ್ಟರ್ ಅವರು, ತಮ್ಮ ಶಕ್ತಿ ಏನಿದೆ ಎಂದು ತೋರಿಸಿದ್ದಾರೆ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ ಎಂದರು.

ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಕೆಲಸ ಮಾಡುತ್ತಿದೆ ಎನ್ನುವ ಬಗ್ಗೆ ಗಮನ ಸೆಳೆದಾಗ, “ನನಗೆ ಎಲ್ಲಾ ಗೊತ್ತಿದೆ ನನಗೆ. ಯಾವ ಶಾಸಕರನ್ನು, ಯಾರು ಯಾವಾಗ ಭೇಟಿ ಮಾಡಿದರು, ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟವರೇ ನನಗೆ ಮತ್ತು ಸಿಎಂಗೆ ಮಾಹಿತಿ ನೀಡುತ್ತಿದ್ದಾರೆ”.

“ಬಿಜೆಪಿಯವರು ಏನು ಆಫರ್ ಕೊಡುತ್ತಿದ್ದಾರೆ ಅನ್ನೋದನ್ನೂ ಹೇಳಿದ್ದಾರೆ. ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನದಲ್ಲಿ ಹೇಳಿಸುತ್ತೇನೆ” ಎಂದು ಹೇಳಿದರು.


Related Articles

Back to top button