Kannada NewsKarnataka NewsLatest

*ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಅವಘಡ: ರಥದ ಚಕ್ರಕ್ಕೆ ಸಿಲುಕಿ ಓರ್ವ ಭಕ್ತನ ಕಾಲು ಕಟ್*

ಪ್ರಗತಿವಾಹಿನಿ ಸುದ್ದಿ: ಮಹಾತ್ಮ ಬಸವೇಶ್ವರ ಜಾತ್ರಾ ಮಹೋತ್ಸವದ ವೇಳೆ ಅವಘಡ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಮೂವರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಕಾಲು ಕಟ್ ಆಗಿರುವ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಈ ಘಟನೆ ನಡೆದಿದೆ. ರಥೋತ್ಸವಕ್ಕೆ ಭಕ್ತಸಾಗರೇ ಹರಿದು ಬಂದಿದೆ. ಭಕ್ತರು ರಥೋತ್ಸವದ ವೇಳೆ ರಥ ಎಳೆಯುತ್ತಿದ್ದಾಗ ನೂಕು ನುಗ್ಗಲು ಉಂಟಾಗಿ ಕೆಲವರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ರಥ ಮುಂದೆ ಸಾಗಿದಾಗ ರಥದ ಚಕ್ರಕ್ಕೆ ಸಿಲುಕಿ ಓರ್ವನ ಎರಡೂ ಕಾಲುಗಳು ಕಟ್ ಆಗಿವೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಧನರಾಜ್, ಭೀಮಾಶಂಕರ್ ಹಾಗೂ ರಿಷಬ್ ಗಾಯಾಳುಗಳು. ಧನರಾಜ್ ಅವರ ಎರಡೂ ಕಾಲುಗಳು ಕಟ್ ಆಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button