Kannada NewsKarnataka NewsLatest

*ಕಾಲುವೆಗೆ ಜಾರಿ ಬಿದ್ದ ಮಗನನ್ನು ರಕ್ಷಿಸಲು ಹೋದ ತಂದೆಯೂ ನೀರುಪಾಲು*

ಪ್ರಗತಿವಾಹಿನಿ ಸುದ್ದಿ: ಕಾಲುವೆಗೆ ಬಿದ್ದ ಮಗನನ್ನು ರಕ್ಷಿಸಲು ಹೋಗಿ ತಂದೆಯೂ ನೀರುಪಾಅಲಾಗಿದ್ದು, ತಂದೆ-ಮಗ ಇಬ್ಬರೂ ಕಾರಂಜಾ ಡ್ಯಾಂ ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಾರಂಜಾ ಡ್ಯಾಂ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ಹಳ್ಳಿಖೇಡ್(ಬಿ) ಗ್ರಾಮದ ವಿಶ್ವನಾಥ(50) ಮತ್ತು ಅಮರೇಶ(23) ಮೃತ ತಂದೆಮಗ.

Home add -Advt

ಬೀದರ್‌ನಲ್ಲಿ ಸಿಮೆಂಟ್ ಖಾಲಿ ಮಾಡಿ ಊರಿಗೆ ಹೋಗುತ್ತಿದ್ದ ವೇಳೆ ಕಾಲುವೆ ಕಾಣುತ್ತಿದ್ದಂತೆ ಮಗ ಅಮರೇಶ್ ಕೈಕಾಲು ತೊಳೆದುಕೊಳ್ಳಲೆಂದು ಕಾಲುವೆಗೆ ಇಳಿದಿದ್ದ. ಈ ವೇಳೆ ಕಾಲು ಜಾರಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದಿದ್ದಾನೆ. ಮಗ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ತಂದೆ ವಿಶ್ವನಾಥ್ ಕೂಡಲೇ ಆತನ ರಕ್ಷಣೆಗೆಂದು ಕಾಲುವೆ ಹಾರಿದ್ದಾರೆ. ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಧನ್ನೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button