Latest

ಬೀದರ್; ಅಪಘಾತದಲ್ಲಿ 7 ಜನರ ದುರ್ಮರಣ; ಸಿಎಂ ಸಂತಾಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೀದರ್ ನಲ್ಲಿ ಟ್ರಕ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಬೀದರ್‌ ಜಿಲ್ಲೆ ಚಿಟಗುಪ್ಪಾ ತಾಲ್ಲೂಕಿನ ಬೆಮ್ಮಳಖೇಡ ಬಳಿ ನಡೆದ ಅಪಘಾತದಲ್ಲಿ 7 ಜನ ಮೃತರಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಗಳಿಗೆ ಶಾಂತಿಯನ್ನು ಕೋರುತ್ತೇನೆ. ಈ ಕುರಿತು ಬೀದರ ಜಿಲ್ಲಾಡಳಿತದೊಂದಿಗೆ ಮಾತನಾಡಿ ಗಾಯಗೊಂಡವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ‌.

Related Articles

ನಿನ್ನೆ ಸಂಜೆ ಬೀದರ್ ಜಿಲ್ಲೆಯ ಬೆಮ್ಮಳಖೇಡ ಬಳಿ ಟ್ರಕ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಮಹಿಳೆಯರು ಸೇರಿ 7 ಜನರು ಸಾವನ್ನಪ್ಪಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ 6 ಜನರು ಸಾವನ್ನಪ್ಪಿದ್ದರು.

ಪೊಲೀಸರಿಗೆ ಚಂದ್ರಶೇಖರ್ ನನ್ನು ಹುಡುಕಲು ಆಗಿಲ್ಲ; ನನ್ನ ಮಗನನ್ನು ಪತ್ತೆ ಮಾಡಿದ್ದು ಕಾರ್ಯಕರ್ತರು

Home add -Advt

https://pragati.taskdun.com/latest/chandrashekhar-death-casem-p-renukacharyareaction/

Related Articles

Back to top button