Kannada NewsKarnataka NewsLatest

*ಮತ್ತೊಂದು ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು*

ದಾವಣಗೆರೆ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಬಳಿ ಈ ಅಪಘಾತ ಸಂಭವಿಸಿದೆ. ನ್ಯಾಮತಿಯ ಮಾಲತೇಶ್ (25) ಹಾಗೂ ಕುದುರೆಕೊಂಡದ ಶೌರ್ಯ (18) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಇಬ್ಬರು ಗಾಯಗಗೊಂಡಿದ್ದಾರೆ. ಗಾಯಾಳುಗಳಾದ ಮಂಜುಳಾ ಹಾಗೂ ಅನಿಲ್ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಸಂಭವಿಸಿದೆ.

Home add -Advt

Related Articles

Back to top button