Kannada NewsKarnataka NewsLatest

*ಮತ್ತೊಂದು ಭೀಕರ ಅಪಘಾತ; ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಬಿದ್ದ ಬೈಕ್ ಸವಾರ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದ ಬೈಕ್ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನ ಪೀಣ್ಯ ಫ್ಲೈ ಓವರ್ ಮೇಲೆ ನಡೆದಿದೆ.

ಪ್ರಸಾದ್ ಮೃತ ಬೈಕ್ ಸವಾರ. ವೇಗವಾಗಿ ಬಂದ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಬೈಕ್ ಸವಾರ ಫ್ಲೈ ಓವರ್ ಮೇಲಿಂದ ಕೆಳಗೆ ಹಾರಿ ಬಿದ್ದಿದ್ದಾನೆ. ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಪೀಣ್ಯ ಸಂಚಾರ ಪೊಲೀಸರು ಭೇಟಿ ನೀಡಿದ್ದಾರೆ.

Home add -Advt


Related Articles

Back to top button