Kannada NewsKarnataka NewsLatest
*ಬೈಕ್ ಡಿಕ್ಕಿ; ನಡೆದು ಹೋಗುತ್ತಿದ್ದ ವಕೀಲ ದುರ್ಮರಣ*


ಪ್ರಗತಿವಾಹಿನಿ ಸುದ್ದಿ: ನಡೆದು ಹೋಗುತ್ತಿದ್ದ ವಕೀಲರೊಬ್ಬರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಬಸವನ ಗುಡಿ ಡಿವಿಜಿ ರಸ್ತೆಯಲ್ಲಿ ನಡೆದಿದೆ.
ಕೆ.ಟಿ.ಡಾಕಪ್ಪ ಮೃತ ವಕೀಲರು. ಶಿವಮೊಗ್ಗ ಮೂಲದ ತೀರ್ಥಹಳ್ಳಿಯ ಡಾಕಪ್ಪ ಹಲವು ವರ್ಷಗಳಿಂದ ವಕೀಲರಾಗಿ ಕಾರ್ಯನಿರ್ವಹಿಸಿತ್ತಿದ್ದರು. ನಿನ್ನೆ ರಾತ್ರಿ ಕಚೇರಿಯಿಂದ ಮನೆಗೆ ಹೋಗಲೆಂದು ಕಾರು ನಿಲ್ಲಿಸಿದ್ದ ಜಾಗಕ್ಕೆ ರಸ್ತೆ ದಾಟಿ ನಡೆದು ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಬಳಿಕ ಇನ್ನೊಂದು ಕಾರಿಗೆ ಬೈಕ್ ಗುದ್ದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಡಾಕಪ್ಪ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಬೈಕ್ ಸವಾರನೂ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.




