Kannada NewsKarnataka NewsLatest

*ಬೆಳಗಾವಿ ಮೂಲದ ಕಾರಾಗೃಹ ಸಿಬ್ಬಂದಿ ಅಪಘಾತದಲ್ಲಿ ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ಮೂಲದ ಕಾರಾಗೃಹ ಸಿಬ್ಬಂದಿ ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

Home add -Advt

ಧಾರವಾಡದ ಗರಗ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ರುದ್ರಪ್ಪ ಸಿದ್ದಣ್ಣವರ್ ಮೃತ ದುರ್ದೈವಿ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಾಡಿ ಮೂಲದ ರುದ್ರಪ್ಪ ಸಿದ್ದಣ್ಣವರ್, ಧಾರವಾಡ ಕೇಂದ್ರ ಕಾರಾಗೃಹದ ಸಿಬ್ಬಂದಿಯಾಗಿದ್ದರು.

ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಗ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button