*ಬೆಳಗಾವಿ ಮೂಲದ ಕಾರಾಗೃಹ ಸಿಬ್ಬಂದಿ ಅಪಘಾತದಲ್ಲಿ ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ಮೂಲದ ಕಾರಾಗೃಹ ಸಿಬ್ಬಂದಿ ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಗರಗ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ರುದ್ರಪ್ಪ ಸಿದ್ದಣ್ಣವರ್ ಮೃತ ದುರ್ದೈವಿ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಾಡಿ ಮೂಲದ ರುದ್ರಪ್ಪ ಸಿದ್ದಣ್ಣವರ್, ಧಾರವಾಡ ಕೇಂದ್ರ ಕಾರಾಗೃಹದ ಸಿಬ್ಬಂದಿಯಾಗಿದ್ದರು. ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಗ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ; … Continue reading *ಬೆಳಗಾವಿ ಮೂಲದ ಕಾರಾಗೃಹ ಸಿಬ್ಬಂದಿ ಅಪಘಾತದಲ್ಲಿ ಸಾವು*