
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಸಮೀಪದ ಮಲಪ್ರಭಾ ನದಿ ಸೇತುವೆ ಮೇಲೆ ಅಪರಿಚಿತ ವಾಹನ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಅಪರಿಚಿತ ವಾಹನವೊಂದು ಎರಡು ಬೈಕ್ ಗಳಿಗೆ ಡಿಕ್ಕಿಯಾದೆ. ಅದರಲ್ಲಿ ಎರಡು ಬೈಕ್ ಸವಾರರ ಬೈಕ್ ನುಜ್ಜು ಗುಜ್ಜಾಗಿದ್ದು, ಓರ್ವ ಬೈಕ್ ಸವಾತ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ.
ಮೃತ ಬೈಕ್ ಸವಾರನ ವಿವರ ತಿಳಿದು ಬಂದಿಲ್ಲ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.