ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದ್ದು ಗೊತ್ತಾಗದೇ ಬಿಸಿಯೂಟ ಸೇವಿಸಿದ್ದ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಇಲ್ಲಿನ ಮದ್ದೂರು ತಾಲೂಕಿನ ಅಂಬರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಶಾಲೆಯಲ್ಲಿ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದರು. ಬಿಸಿಯೂಟ ಸೇವಿಸಿದ ಕೆಲ ಸಮಯದಲ್ಲೇ ವಿದ್ಯಾರ್ಥಿಗಳಿಗೆ ವಾಂತಿ, ಭೇದಿ ಆರಂಭವಾಗಿದೆ. ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದಾರೆ. ಪರಿಶೀಲನೆ ನಡೆಸಿದಾಗ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿತ್ತು ಎಂಬ ವಿಚಾರ ಗೊತ್ತಾಗಿದೆ.

19 ವಿದ್ಯಾರ್ಥಿಗಳು, 10 ವಿದ್ಯಾರ್ಥಿನಿಯರು ಸೇರಿದಂತೆ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಎಂ.ದೊಡ್ಡಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕನ್ನಡ ಚಿತ್ರರಂಗದಲ್ಲಿ ಮತ್ತೆ ಮೀಟೂ ಆರೋಪ; ಕಹಿ ಅನುಭವ ಬಿಚ್ಚಿಟ್ಟ ಖ್ಯಾತ ನಟಿ

Home add -Advt

https://pragati.taskdun.com/latest/sandalwoodactress-ashitametoo/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button