Kannada NewsLatest

ಬೆಳಗಾವಿ: ಅರಣ್ಯ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಅರಣ್ಯ ಸಿಬ್ಬಂದಿಗಳ ಮೇಲೆಯೇ ಕಾಡುಕೋಣಗಳು ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕೆಂಪಟ್ಟಿ ಗ್ರಾಮದಲ್ಲಿ ನಡೆದಿದೆ.

ಕೆಂಪಟ್ಟಿ ಗ್ರಾಮದ ಹೊರವಲಯದಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು, ಅರಣ್ಯ ಸಿಬ್ಬಂದಿ ಸೇರಿ ಇಬ್ಬರ ಮೇಲೆ ದಾಳಿ ನಡೆಸಿವೆ.

ಅರಣ್ಯ ಸಿಬ್ಬಂದಿ ಕೃಷ್ಣ ಗುರವ್ ಹಾಗೂ ಸ್ಥಳೀಯ ವ್ಯಕ್ತಿ ಚಿದಾನಂದ ನಾಯಕ ಕಾಡಾನೆ ದಾಳಿಯಿಂದ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ರಾಯಭಾಗ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮತ್ತೊಂದು ಅಕ್ರಮ ಬಯಲು; ಹೂಕುಂಡದಲ್ಲಿ ಬ್ಲೂಟೂತ್ ಇಟ್ಟು ಪರೀಕ್ಷೆಯಲ್ಲಿ ಪಾಸ್ ಆದ ಅಭ್ಯರ್ಥಿ

Home add -Advt

Related Articles

Back to top button