Politics

*ಅಮಾನತುಗೊಂಡಿದ್ದ ಬಿಜೆಪಿ 18 ಶಾಸಕರಿಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: 6 ತಿಂಗಳ ಕಾಲ ಅಮಾನತುಗೊಂಡಿದ್ದ ಬಿಜೆಪಿಯ 18 ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.

ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಬಿಜೆಪಿಯ 18 ಶಾಸಕರ ಅಮಾನತು ಆದೇಶ ಹಿಂಪಡೆಯಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್.ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮುಂತಾದವರು ಭಾಗವಹಿಸಿದ್ದರು.

Related Articles

Back to top button