Kannada NewsKarnataka NewsNationalPolitics

*ರಾಜ್ಯ ಸಭೆ ಹಾಗೂ ಎಂಎಲ್‌ಸಿ ಟಿಕೆಟ್ ಘೋಷಣೆ ಮಾಡಿದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಚುನಾವಣೆಗೆ ಕೊನೆಗೂ ಬಿಜೆಪಿ ಟಿಕೆಟ್​ ಘೋಷಣೆ ಮಾಡಿದೆ. 

ಪ್ರೊ ಎಂ.ನಾಗರಾಜ್​ ಅವರಿಗೆ ರಾಜ್ಯಸಭೆ ಟಿಕೆಟ್​ ನೀಡಲಾಗಿದೆ. ಹಾಗೆಯೇ, ವಿಧಾನಪರಿಷತ್​​ಗೆ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಲಿಂಗರಾಜ್ ಪಾಟೀಲ್​ ಹಾಗೂ ರಘು ಕೌಟಿಲ್ಯ ಅವರಿಗೆ ಬಿಜೆಪಿ ಹೈಕಮಾಂಡ್ ವಿಧಾನಪರಿಷತ್ ಟಿಕೆಟ್​ ನೀಡಿದೆ. 

ಹಲವು ದಿನಗಳ ಗೊಂದಲದ ಬಳಿಕ ಕೊನೆಗೂ ರಾಜ್ಯಸಭೆ ಹಾಗೂ ವಿಧಾನಪರಿಷತ್ ಅಭ್ಯರ್ಥಿಗಳ ಹೆಸರುಗಳು ಹೊರಬಿದ್ದಿವೆ.

ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಮತ್ತೆ ರಾಜ್ಯಸಭೆ ಸ್ಥಾನ ನೀಡಲಾಗುತ್ತಿದೆ ಎಂಬ ಚರ್ಚೆಗಳು ಬಲವಾಗಿ ಕೇಳಿಬಂದಿದ್ದವು. ಅಲ್ಲದೆ, ರಾಜ್ಯ ಬಿಜೆಪಿ ಡಿ.ವಿ.ಸದಾನಂದ ಗೌಡ ಹಾಗೂ ಮಾಜಿ ಶಾಸಕ ನಿರ್ಮಲ ಕುಮಾರ್ ಸುರಾನ ಹೆಸರುಗಳನ್ನು ಸಹ ಹೈಕಮಾಂಡ್​​ಗೆ ಕಳುಹಿಸಿದೆ ಎನ್ನಲಾಗಿತ್ತು. ಆದರೆ ಹೈಕಮಾಂಡ್ ಇವೆಲ್ಲರನ್ನೂ ಬಿಟ್ಟು ಪ್ರೊ ಎಂ.ನಾಗರಾಜ್ ಅವರಿಗೆ ಮಣೆ ಹಾಕಿದೆ.

Home add -Advt

Related Articles

Back to top button