Latest

*BJP ಪ್ರಜಾ ಪ್ರಣಾಳಿಕೆ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಪ್ರಣಾಳಿಕೆಯಲ್ಲಿನ ಮಹತ್ವದ ಘೋಷಣೆ:
ಸಿರಿಧಾನ್ಯ ಉತ್ಪಾದನೆಗೆ ಆದ್ಯತೆ
ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ
5ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ
BPL ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು
ಬಿಪಿಎಲ್ ಕುಟುಂಬಕ್ಕೆ ಉಚಿತ 3 ಗ್ಯಾಸ್ ಸಿಲಿಂಡರ್
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗಳಿಗೆ ಉಚಿತ ಗ್ಯಾಸ್
ಅಟಲ್ ಆಹಾರ ಕೇಂದ್ರ ಸ್ಥಾಪನೆ ಭರವಸೆ
ಏಕರೂಪ ನಾಗರಿಕ ಸಂಹಿತೆ ಜಾರಿ
ಅಪಾರ್ಟ್ ಮೆಂಟ್ ಓನರ್ ಶಿಪ್ ಆಕ್ಟ್ ತಿದ್ದುಪಡಿ

ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ನಿವೇಶನ ಹಂಚಿಕೆ
ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಸ್ಥಾಪನೆ
ವಿಶ್ವೇಶ್ವರಯ್ಯ ವಿದ್ಯಾಯೋಜನೆಯಡಿ ಸರ್ಕಾರಿ ಶಾಲೆಗಳು ಮೇಲ್ದರ್ಜೆಗೆ
ಯುವ, ವೃತ್ತಿಪರರಿಗಾಗಿ ಶಿಕ್ಷಣ , ಉದ್ಯೋಗಕ್ಕಾಗಿ ಸಮನ್ವಯ ಯೋಜನೆ
ಐಎ ಎಸ್, ಕೆ ಎ ಎಸ್ ಉದ್ಯೋಗಾಕಾಂಕ್ಷಿಗಳ ತರಬೇತಿಗೆ ಆರ್ಥಿಕ ನೆರವು

Home add -Advt
https://pragati.taskdun.com/lpg-cylinderratedown19-kg-cylinder/
https://pragati.taskdun.com/heavy-rainbidar3-peoplewashed-awayriver/


Related Articles

Back to top button