Kannada NewsKarnataka NewsLatest

ವಾರದೊಳಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ

ಪ್ರಗತಿವಾಹಿನಿ ಸುದ್ದಿ, ಗೋಕಾಕ :

ವಾರದೊಳಗೆ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು  ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಬಸಳಿಗುಂದಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು,  ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅತೃಪ್ತ ಜೆಡಿಎಸ್-ಕಾಂಗ್ರೇಸ್ ಶಾಸಕರು ರಾಜೀನಾಮೆ ನೀಡುತ್ತಲೇ ಇದ್ದಾರೆ. ರಾಜೀನಾಮೆ ನೀಡಿರುವವರ ಸಂಖ್ಯೆ ೧೪ಕ್ಕೆ ಏರಿದ್ದು, ಬಿಜೆಪಿ ಸರ್ಕಾರ ರಚನೆಗೆ ವೇದಿಕೆ ಸಿದ್ಧಗೊಂಡಿದೆ. ಕೇಂದ್ರದಲ್ಲಿಯೂ ಮೋದಿ  ನೇತೃತ್ವದ ಬಿಜೆಪಿ ಸರ್ಕಾರ ಇರುವುದರಿಂದ, ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹಣಕಾಸಿನ ನೆರವು ಹರಿದುಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಸಳಿಗುಂದಿ ಗ್ರಾಮದ ಮಹಿಳೆಯರಿಗಾಗಿ ಸಾಮೂಹಿಕ ಶೌಚಾಲಯಗಳನ್ನು ನಿರ್ಮಿಸಿಕೊಡುವುದಾಗಿ ಅವರು  ಈ ವೇಳೆ ಭರವಸೆ ನೀಡಿದರು.
ಗ್ರಾಮದ ಅಭಿವೃದ್ಧಿ ಕಾರ್ಯಗಳಲ್ಲಿ ಎಲ್ಲರೂ ಒಂದಾಗಿ ದುಡಿಯುತ್ತಿರುವುದರಿಂದ ಸರ್ಕಾರದ ಯೋಜನೆಗಳು ಸದ್ಬಳಕೆಯಾಗುತ್ತಿವೆ. ಮೊದಲಿನಿಂದಲೂ ಬಸಳಿಗುಂದಿ ಗ್ರಾಮದ ಕಾರ್ಯಕರ್ತರು ನಾನು ಹೇಳಿದಂತೆಯೇ ನಡೆದುಕೊಳ್ಳುತ್ತಿದ್ದಾರೆ. ಪ್ರತಿ ಚುನಾವಣೆಯಲ್ಲಿ ನನಗೆ ಲೀಡ್ ನೀಡುತ್ತ ಆಶೀರ್ವದಿಸುತ್ತಿದ್ದಾರೆ. ಗ್ರಾಮಸ್ಥರ ಋಣ ನನ್ನ ಮೇಲಿದ್ದು, ಈ ಋಣವನ್ನು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ತೀರಿಸಲು ಪ್ರಯತ್ನಿಸುತ್ತೇನೆಂದು ಅವರು ಹೇಳಿದರು.
ನ್ಯಾಯವಾದಿ ಮುತ್ತೆಪ್ಪ ಕುಳ್ಳೂರ, ಗಂಗಪ್ಪ ನಡುವಿನಮನಿ, ಸುರೇಶ ಮರಾಠೆ, ಗ್ರಾಪಂ ಸದಸ್ಯರು, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಹೆಚ್ಚಿನ ಸುದ್ದಿಗಳಿಗಾಗಿ http://pragativahin.com ನೋಡಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button