Belagavi NewsBelgaum NewsElection NewsKannada NewsKarnataka NewsPolitics

ಮತ ಎಣಿಕೆ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಕಾರ್ಯಗಾರ ನಡೆಸಿದ ಬಿಜೆಪಿ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಭಾರತೀಯ ಜನತಾ ಪಕ್ಷ ಚಿಕ್ಕೋಡಿ ವತಿಯಿಂದ ಇಂದು ಯಕ್ಸಂಬಾ ಪಟ್ಟಣದಲ್ಲಿ ಲೋಕಸಭಾ ಚುನಾವಣೆ ಅವಲೋಕನ ಸಭೆ ಹಾಗೂ ಮತ ಎಣಿಕೆ ಏಜೆಂಟರ ಕಾರ್ಯಾಗಾರ ಸಭೆ ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾಸಾಹೇಬ ಜೊಲ್ಲೆ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಜೂನ್  04 ರಂದು ನಡೆಯುವ ಮತ ಎಣಿಕೆಯಲ್ಲಿ ನಿರ್ವಹಿಸಬೇಕಾದ ಕಾರ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಿದರು.

ಈ ಸಭೆಯಲ್ಲಿ ಶಾಸಕರಾದ  ದುರ್ಯೋಧನ ಐಹೊಳೆ, ಮಾಜಿ ಶಾಸಕ ಮಹೇಶ ಕುಮಠಳ್ಳಿ, ಜಿಲ್ಲಾಧ್ಯಕ್ಷರಾದ ಸತೀಶ ಅಪ್ಪಾಜಿಗೋಳ, ಜೊಲ್ಲೆ ಗ್ರೂಪ್ ನ ಎಲ್ಲ ಅಂಗ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕ ಮಂಡಳಿ ಸದಸ್ಯರು, ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ನಿರ್ದೇಶಕರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button