ಕಾಂಗ್ರೆಸ್ ಅಭಿವೃದ್ಧಿ ನೋಡಿ ಬಿಜೆಪಿಯವರಿಗೆ ಭ್ರಮನಿರಸನವಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಅಥಣಿ : ಕಾಂಗ್ರೆಸ್ ಸರಕಾರ ಗ್ಯಾರಂಟಿಯ ಜೊತೆಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ ಬಿಜೆಪಿಯವರ ಕಣ್ಣಿಗೆ ಇದೆಲ್ಲ ಕಾಣುತ್ತಿಲ್ಲವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದ್ದಾರೆ. ಅಥಣಿಯಲ್ಲಿ ಬುಧವಾರ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್ ಎಂದರೆ ಬದ್ದತೆ, ಬಸವಣ್ಣನವರು ಕಂಡ ಸಮಾನತೆಯ ಕನಸನ್ನು ನನಸು ಮಾಡುವ ಪಕ್ಷ. ಆದರೆ ಬಿಜೆಪಿಯವರು ನಮ್ಮ ಗ್ಯಾರಂಟಿಗಳ ಬಗ್ಗೆ ಬಹಳಷ್ಟು ಕೀಳಾಗಿ … Continue reading ಕಾಂಗ್ರೆಸ್ ಅಭಿವೃದ್ಧಿ ನೋಡಿ ಬಿಜೆಪಿಯವರಿಗೆ ಭ್ರಮನಿರಸನವಾಗಿದೆ – ಲಕ್ಷ್ಮೀ ಹೆಬ್ಬಾಳಕರ್